9:20 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕನ್ನಡ ಶಾಲೆ ಉಳಿಸುವ ಕಾರ್ಯಕ್ರಮ ಕಾಂಗ್ರೆಸ್ ಗೆ ಯಾಕೆ ಪಥ್ಯವಾಗುತ್ತಿಲ್ಲ: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

18/11/2022, 22:27

ಸುರತ್ಕಲ್(reporterkarnataka.com): ಕನ್ನಡ ಶಾಲೆಯನ್ನು ಪ್ರೋತ್ಸಾಹಿಸುವ ಜತೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವ ಹಾಗೂ ಅವರಲ್ಲಿ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಇದಾಗಿದ್ದು,ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಮಾಡುತ್ತಿದೆ.

ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವ ರಾಜಕೀಯ ಲಕ್ಷಣ ಕಂಡಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಪ್ರಶ್ನಿಸಿದ್ದಾರೆ.
ಕನ್ನಡ ಶಾಲೆಗಳು ಹೆಚ್ಚಾಗಿ ಸರಕಾರದ ಶಾಲೆಗಳಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಸೇರಲು ಆಯಾ ವಿಭಾಗದ ಶಿಕ್ಷಣ ಅಧಿಕಾರಿಗಳ ಅನುಮತಿ ಬೇಕಾಗುವುದು ಸಾಮಾನ್ಯವಾಗಿದೆ.

ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿರುವುದಲ್ಲಿ ಯಾವುದೇ ಸರಕಾರಿ ಯಂತ್ರ ದುರುಪಯೋಗವಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕನಾಗಿರುವ ರಮಾನಾಥ ರೈ ಅವರಿಗೆ ಇದರಲ್ಲಿ ರಾಜಕೀಯ ದೃಷ್ಟಿಕೋನದಿಂದ ದುರುಪಯೋಗ ಆಗಿರುವಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಮೂರ್ತಿ ಪೂಜೆಯನ್ನ ನಿಷೇಧ ಮಾಡಿರುವ ಮುಸ್ಲಿಂ ಸಮಾಜದ ಓಲೈಕೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಎಂಬ ಕಾರ್ಯಕ್ರಮ ಆರಂಭಿಸಿ ಮುಸ್ಲಿಮ್ ಸಮಾಜದಲ್ಲಿ ವಿರೋಧ ಎದುರಿಸುವಂತಾಗಿದೆ. ಹಿರಿಯ ರಾಜಕಾರಣಿ ಇಬ್ರಾಹಿಂ ಅವರು ಟಿಪ್ಪುವಿನ ಮೂರ್ತಿಯನ್ನು ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದು ಸರಿಯಾಗಿದೆ.

ಕರಾವಳಿ ಭಾಗ ಮಡಿಕೇರಿ ಹಾಗೂ ರಾಜ್ಯದಾದ್ಯಂತ ನೂರಾರು ದೇವಸ್ಥಾನಗಳ ನಾಶಕ್ಕೆ ಕಾರಣವಾದ ಹಾಗೂ ಅಮಾಯಕ ಹಿಂದುಗಳ ಸಾಮೂಹಿಕ ಕಗ್ಗೊಲೆ ನಡೆಸಿರುವ ಟಿಪ್ಪು ಜಯಂತಿ ಕಾರ್ಯಕ್ರಮ ಭಾರತಕ್ಕೆ ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು