4:23 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Kannada | ಬಾನು ಮುಷ್ತಾಕ್ ಗೆ ಬುಕರ್ ಪ್ರಶಸ್ತಿ ಭರವಸೆಯ ಪ್ರತೀಕ: ಡಾ ಪುರುಷೋತ್ತಮ ಬಿಳಿಮಲೆ

02/06/2025, 20:31

ಬೆಂಗಳೂರು(reporterkarnataka.com): ಈ ದೇಶದ ಸಂಸ್ಕೃತಿಯಿಂದಲೇ ಮುಸಲ್ಮಾನರನ್ನು ಅಳಿಸಿ ಹಾಕುವ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿರುವ ಇಂದಿನ ಸಂದರ್ಭದಲ್ಲಿ ಕನ್ನಡದ ಪ್ರಮುಖ ಲೇಖಕಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ಸಂದಿರುವುದು ಒಂದು ಭರವಸೆಯ ರೂಪಕವಾಗಿ ಕಂಡಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.
ಸೋಮವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಬಾನು ಮುಷ್ತಾಕ್ ತಮ್ಮನ್ನು ಜಾತ್ರೆಯಲ್ಲಿ ನಿಂತ ಏಕಾಂಗಿ ಎಂದು ಕರೆದುಕೊಳ್ಳುತ್ತಾರೆ. ಮುಸಲ್ಮಾನ ಮಹಿಳೆಯಲ್ಲಿ ಹುಟ್ಟಿದ ಈ ರೀತಿಯ ಏಕಾಂಗಿತನವೇ ಅವರನ್ನು ಜಗತ್ತಿನ ಮುಖ್ಯ ಲೇಖಕಿಯಾಗಿ ರೂಪಿಸಿದ್ದು, ಇದರ ಪ್ರಾಮುಖ್ಯತೆಯನ್ನು ನಾಗರಿಕ ಸಮಾಜವು ಅರ್ಥ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.
ಹಾರ್ಟ್ ಲ್ಯಾಂಪ್ ಕೃತಿಯನ್ನು ಕೇವಲ ಶೈಕ್ಷಣಿಕ ಚೌಕಟ್ಟಿನಲ್ಲಿ ನೋಡಬೇಕಿಲ್ಲ. ಅದರಾಚೆಗೂ ಈ ಕೃತಿಯ ಮಹತ್ವ ವಿಸ್ತರಿಸಿದ್ದು, ಕೃತಿಯ ಮಾನವೀಯ ಮತ್ತು ಸಾಮಾಜಿಕ ನಿಲುವುಗಳು ಸಾರ್ವಕಾಲಿಕ ಮತ್ತು ಸಾರ್ವತ್ರಿಕವಾಗಿವೆ ಎಂದಿರುವ ಬಿಳಿಮಲೆ, 2010ರ ಜ್ಞಾನಪೀಠದ ಬಳಿಕ ಕನ್ನಡಕ್ಕೆ ಸಂದ ಅತ್ಯುನ್ನತ ಗೌರವ ಇದಾಗಿದೆ. ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಜೋಡಿ ಇದನ್ನು ಸಾಧ್ಯವಾಗಿಸಿರುವುದು ಕನ್ನಡಿಗರೆಲ್ಲರ ಹೆಮ್ಮೆಗೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.
ಅನಂತಮೂರ್ತಿ ಅವರ ಸಂಸ್ಕಾರ ಕೃತಿಯನ್ನು ಎ.ಕೆ.ರಾಮಾನುಜನ್ ಅನುವಾದಿಸಿದ್ದರು. ಆ ಕೃತಿಗೆ ಬೂಕರ್ ಪ್ರಶಸ್ತಿ ಸ್ವಲ್ಪದರಲ್ಲಿ ಕೈ ತಪ್ಪಿತ್ತು ಎಂಬ ಅಂಶವನ್ನು ಸ್ಮರಿಸಿರುವ ಬಿಳಿಮಲೆ, ದೀಪಾ ಭಾಸ್ತಿ ಕನ್ನಡಕ್ಕೆ ಈ ಕೊರತೆಯನ್ನು ಕರ್ನಾಟಕದ ಬಹುಭಾಷಾ ನೆಲೆಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಉತ್ಕೃಷ್ಟವಾಗಿ ತಮ್ಮ ಅನುವಾದ ಕಾರ್ಯವನ್ನು ನಿರ್ವಹಿಸುವ ಮೂಲಕ ನೀಗಿಸಿದ್ದಾರೆ ಎಂದು ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರಾದ ಡಾ. ವಿ ಪಿ ನಿರಂಜನಾರಾಧ್ಯ, ಡಾ ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ ಸಂತೋಷ ಹಾನಗಲ್ಲ, ಆಪ್ತ ಕಾರ್ಯದರ್ಶಿ ಟಿ ಎಸ್ ಫಣಿಕುಮಾರ್ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು