5:38 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

Kannada | ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಠ್ಯ: ಸರಕಾರದ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಶ್ಲಾಘನೆ

04/04/2025, 10:35

ಬೆಂಗಳೂರು(reporterkarnataka.com): ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ ಸರ್ಕಾರದ ಈ ಕ್ರಮ ವಿದ್ಯಾರ್ಥಿಗಳ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದ್ದು, ಇದು ಮಾದರಿ ನಡೆಯಾಗಿದೆ. ಈ ಸದಾಶಯವು ಸಾಕಾರಗೊಳ್ಳಬೇಕಾದಲ್ಲಿ ವಿಶ್ವವಿದ್ಯಾಲಯವು ಉಪನ್ಯಾಸಕರಿಗೆ ಗುಣಮಟ್ಟದ ತರಬೇತಿಯನ್ನು ನೀಡಿ ಕನ್ನಡದಲ್ಲಿ ಬೋಧಿಸುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದ್ದಾರೆ. ಕನ್ನಡದಲ್ಲಿ ಪದವಿ ಪಡೆಯುತ್ತೇವೆಂದು ಮುಂದೆ ಬರುವ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ನೀಡಿದಲ್ಲಿ ಅದು ಪ್ರೋತ್ಸಾಹದಾಯಕ ನಡೆಯಾಗುತ್ತದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣ ಕನ್ನಡದ ಮೂಲಕವೂ ಲಭ್ಯವಿದೆ ಎನ್ನುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದ್ದು, ಕನ್ನಡದಲ್ಲಿ ಕಲಿಯುವ ಕೀಳರಿಮೆಯನ್ನು ತೊಡೆದುಹಾಕುವಲ್ಲಿ ಸರ್ಕಾರ ವಿಶೇಷ ಪ್ರಯತ್ನ ನಡೆಸಬೇಕಾಗಿದೆ ಎಂದಿರುವ ಬಿಳಿಮಲೆ ಕನ್ನಡದಲ್ಲಿಯೂ ಬೋಧಿಸುವ ಉಪನ್ಯಾಸಕರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸರ್ಕಾರ ಮುಂದಾದರೆ ಕನ್ನಡದ ಹಿತದೃಷ್ಟಿಯಿಂದ ಹೊಸ ಶಕೆ ಆರಂಭವಾಗಲಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು