12:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Kannada | ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಠ್ಯ: ಸರಕಾರದ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಶ್ಲಾಘನೆ

04/04/2025, 10:35

ಬೆಂಗಳೂರು(reporterkarnataka.com): ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ ಸರ್ಕಾರದ ಈ ಕ್ರಮ ವಿದ್ಯಾರ್ಥಿಗಳ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದ್ದು, ಇದು ಮಾದರಿ ನಡೆಯಾಗಿದೆ. ಈ ಸದಾಶಯವು ಸಾಕಾರಗೊಳ್ಳಬೇಕಾದಲ್ಲಿ ವಿಶ್ವವಿದ್ಯಾಲಯವು ಉಪನ್ಯಾಸಕರಿಗೆ ಗುಣಮಟ್ಟದ ತರಬೇತಿಯನ್ನು ನೀಡಿ ಕನ್ನಡದಲ್ಲಿ ಬೋಧಿಸುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದ್ದಾರೆ. ಕನ್ನಡದಲ್ಲಿ ಪದವಿ ಪಡೆಯುತ್ತೇವೆಂದು ಮುಂದೆ ಬರುವ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ನೀಡಿದಲ್ಲಿ ಅದು ಪ್ರೋತ್ಸಾಹದಾಯಕ ನಡೆಯಾಗುತ್ತದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣ ಕನ್ನಡದ ಮೂಲಕವೂ ಲಭ್ಯವಿದೆ ಎನ್ನುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದ್ದು, ಕನ್ನಡದಲ್ಲಿ ಕಲಿಯುವ ಕೀಳರಿಮೆಯನ್ನು ತೊಡೆದುಹಾಕುವಲ್ಲಿ ಸರ್ಕಾರ ವಿಶೇಷ ಪ್ರಯತ್ನ ನಡೆಸಬೇಕಾಗಿದೆ ಎಂದಿರುವ ಬಿಳಿಮಲೆ ಕನ್ನಡದಲ್ಲಿಯೂ ಬೋಧಿಸುವ ಉಪನ್ಯಾಸಕರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸರ್ಕಾರ ಮುಂದಾದರೆ ಕನ್ನಡದ ಹಿತದೃಷ್ಟಿಯಿಂದ ಹೊಸ ಶಕೆ ಆರಂಭವಾಗಲಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು