3:39 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Kannada | ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಠ್ಯ: ಸರಕಾರದ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಶ್ಲಾಘನೆ

04/04/2025, 10:35

ಬೆಂಗಳೂರು(reporterkarnataka.com): ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ ಸರ್ಕಾರದ ಈ ಕ್ರಮ ವಿದ್ಯಾರ್ಥಿಗಳ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದ್ದು, ಇದು ಮಾದರಿ ನಡೆಯಾಗಿದೆ. ಈ ಸದಾಶಯವು ಸಾಕಾರಗೊಳ್ಳಬೇಕಾದಲ್ಲಿ ವಿಶ್ವವಿದ್ಯಾಲಯವು ಉಪನ್ಯಾಸಕರಿಗೆ ಗುಣಮಟ್ಟದ ತರಬೇತಿಯನ್ನು ನೀಡಿ ಕನ್ನಡದಲ್ಲಿ ಬೋಧಿಸುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದ್ದಾರೆ. ಕನ್ನಡದಲ್ಲಿ ಪದವಿ ಪಡೆಯುತ್ತೇವೆಂದು ಮುಂದೆ ಬರುವ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ನೀಡಿದಲ್ಲಿ ಅದು ಪ್ರೋತ್ಸಾಹದಾಯಕ ನಡೆಯಾಗುತ್ತದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣ ಕನ್ನಡದ ಮೂಲಕವೂ ಲಭ್ಯವಿದೆ ಎನ್ನುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದ್ದು, ಕನ್ನಡದಲ್ಲಿ ಕಲಿಯುವ ಕೀಳರಿಮೆಯನ್ನು ತೊಡೆದುಹಾಕುವಲ್ಲಿ ಸರ್ಕಾರ ವಿಶೇಷ ಪ್ರಯತ್ನ ನಡೆಸಬೇಕಾಗಿದೆ ಎಂದಿರುವ ಬಿಳಿಮಲೆ ಕನ್ನಡದಲ್ಲಿಯೂ ಬೋಧಿಸುವ ಉಪನ್ಯಾಸಕರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸರ್ಕಾರ ಮುಂದಾದರೆ ಕನ್ನಡದ ಹಿತದೃಷ್ಟಿಯಿಂದ ಹೊಸ ಶಕೆ ಆರಂಭವಾಗಲಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು