3:16 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

Kannada | ಕನ್ನಡದಲ್ಲಿ ತಾಂತ್ರಿಕ ಶಿಕ್ಷಣ ಪಠ್ಯ: ಸರಕಾರದ ಕ್ರಮಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಶ್ಲಾಘನೆ

04/04/2025, 10:35

ಬೆಂಗಳೂರು(reporterkarnataka.com): ತಾಂತ್ರಿಕ ಶಿಕ್ಷಣ ಪಠ್ಯವನ್ನು ಕನ್ನಡದಲ್ಲಿಯೂ ಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರವು ಮುಂದಾಗಿರುವುದು ಕನ್ನಡದ ಉಳಿವಿನ ದೃಷ್ಟಿಯಿಂದ ಅತ್ಯಂತ ಸ್ವಾಗತಾರ್ಹ ಕ್ರಮವೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ರವರಿಗೆ ಪತ್ರ ಬರೆದಿರುವ ಬಿಳಿಮಲೆ ಸರ್ಕಾರದ ಈ ಕ್ರಮ ವಿದ್ಯಾರ್ಥಿಗಳ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದ್ದು, ಇದು ಮಾದರಿ ನಡೆಯಾಗಿದೆ. ಈ ಸದಾಶಯವು ಸಾಕಾರಗೊಳ್ಳಬೇಕಾದಲ್ಲಿ ವಿಶ್ವವಿದ್ಯಾಲಯವು ಉಪನ್ಯಾಸಕರಿಗೆ ಗುಣಮಟ್ಟದ ತರಬೇತಿಯನ್ನು ನೀಡಿ ಕನ್ನಡದಲ್ಲಿ ಬೋಧಿಸುವಂತೆ ಪ್ರೋತ್ಸಾಹಿಸಬೇಕೆಂದು ಹೇಳಿದ್ದಾರೆ. ಕನ್ನಡದಲ್ಲಿ ಪದವಿ ಪಡೆಯುತ್ತೇವೆಂದು ಮುಂದೆ ಬರುವ ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ವಿಶೇಷ ವಿದ್ಯಾರ್ಥಿ ವೇತನವನ್ನು ನೀಡಿದಲ್ಲಿ ಅದು ಪ್ರೋತ್ಸಾಹದಾಯಕ ನಡೆಯಾಗುತ್ತದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣ ಕನ್ನಡದ ಮೂಲಕವೂ ಲಭ್ಯವಿದೆ ಎನ್ನುವ ಮನಸ್ಥಿತಿಯನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಬೇಕಾದ್ದು ಸರ್ಕಾರದ ಜವಾಬ್ದಾರಿಯಾಗಿದ್ದು, ಕನ್ನಡದಲ್ಲಿ ಕಲಿಯುವ ಕೀಳರಿಮೆಯನ್ನು ತೊಡೆದುಹಾಕುವಲ್ಲಿ ಸರ್ಕಾರ ವಿಶೇಷ ಪ್ರಯತ್ನ ನಡೆಸಬೇಕಾಗಿದೆ ಎಂದಿರುವ ಬಿಳಿಮಲೆ ಕನ್ನಡದಲ್ಲಿಯೂ ಬೋಧಿಸುವ ಉಪನ್ಯಾಸಕರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕ್ರಮಕ್ಕೆ ಸರ್ಕಾರ ಮುಂದಾದರೆ ಕನ್ನಡದ ಹಿತದೃಷ್ಟಿಯಿಂದ ಹೊಸ ಶಕೆ ಆರಂಭವಾಗಲಿದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು