1:01 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕನ್ನಡದ ಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ

19/02/2022, 07:49

ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿವೆ.

ರಾಜೇಶ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜೇಶ್ ಅವರಿಗೆ ಬೆಂಗಳೂರಿನ ಕಸ್ತೂರಬಾ ನಗರದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ನಟ ರಾಜೇಶ್ ಬೆಂಗಳೂರಿನಲ್ಲೇ ಜನಿಸಿದವರು. ಇವರ ನಿಜನಾಮ ಮುನಿ ಚೌಡಪ್ಪ. ಚಿಕ್ಕವಯಸ್ಸಿನಲ್ಲೇ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಮುನಿ ಚೌಡಪ್ಪ ರಂಗಭೂಮಿ ಪ್ರವೇಶಿಸಿದರು. ತಂದೆ-ತಾಯಿಗೆ ಗೊತ್ತಿಲ್ಲದಂತೆ ‘ಸುದರ್ಶನ ನಾಟಕ ಮಂಡಳಿ’ ಸೇರಿದ ಮುನಿ ಚೌಡಪ್ಪ ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಹೆಸರಿನಿಂದ ಗುರುತಿಸಿಕೊಂಡರು.

1968ರಲ್ಲಿ ತೆರೆಕಂಡ ‘ನಮ್ಮ ಊರು’ ಚಿತ್ರದಲ್ಲಿ ತಮ್ಮ ಹೆಸರನ್ನು ವಿದ್ಯಾಸಾಗರ್‌ ಇಂದ ರಾಜೇಶ್‌ ಎಂದು ಬದಲಾಯಿಸಿಕೊಂಡರು. ನಟ ರಾಜೇಶ್ ಅವರ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ಚಿತ್ರ ‘ನಮ್ಮ ಊರು’. ಸಿ.ವಿ.ಶಿವಶಂಕರ್ ನಿರ್ದೇಶನದ ‘ನಮ್ಮ ಊರು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ನಟ ರಾಜೇಶ್ ಗಾಯಕರಾಗಿಯೂ ಜನಪ್ರಿಯತೆ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು