10:09 PM Thursday13 - February 2025
ಬ್ರೇಕಿಂಗ್ ನ್ಯೂಸ್
ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಮುಖ್ಯಮಂತ್ರಿಗಳ… A Walk up the Hill | ಪ್ರೊ. ಮಾಧವ ಗಾಡ್ಗೀಳ್ ಅವರ… PSI Suspension | ಚಿಕ್ಕಮಗಳೂರು: ಕರ್ತವ್ಯಲೋಪ; ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅಮಾನತು ಮಂಗಳೂರು: ನೇಶನಲ್ ಈಜು ಚಾಂಪಿಯನ್ 35 ವರ್ಷಗಳಿಂದಲೂ ಸ್ವಿ‌ಮ್ಮಿಂಗ್ ಪೂಲ್ ಲೈಫ್ ಗಾರ್ಡ್! ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ…

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು