5:53 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ…

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು