4:19 AM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು