11:50 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು