5:08 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು