5:47 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು