2:59 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕಣ್ಣಾರೆ ಕಂಡ ಪದ್ಮಶ್ರೀ: ಹತ್ತಾರು ಹಾಜಬ್ಬರು ನಮ್ಮ ನಡುವೆ ಹುಟ್ಟಿಬರಲಿ

20/11/2021, 22:46

ನವೆಂಬರ್ 14, 2021, ಮಕ್ಕಳ ದಿನಾಚರಣೆಯ ಸಂಭ್ರಮ. ಹೊರಗೆ ಜೋರಾಗಿ ಮಳೆ ಸುರಿಯುತ್ತಿತ್ತು. ನಮ್ಮ ಊರಿನ ಹೆಮ್ಮೆಯ ಪದ್ಮಶ್ರೀ ಪುರಸ್ಕೃತ ಹಾಜಬ್ಬ ರವರನ್ನು ಜೆಸಿಐ ಮಂಗಳಗಂಗೋತ್ರಿ ಘಟಕದ ವತಿಯಿಂದ ಭೇಟಿ ಮಾಡುವುದೆಂದು ಮೊದಲೇ ನಿರ್ಧರಿಸಲಾಗಿತ್ತು.

ಮಳೆಯ ಆರ್ಭಟ ನೋಡುವಾಗ ಕತ್ತಲಿನಲ್ಲಿ ಹೋಗುವುದೋ ಬೇಡವೋ ಎಂಬ ದ್ವಂದ್ವದಲ್ಲಿ ನಾನು  ಮುಳುಗಿದೆ. ಏನೇ ಆಗಲಿ ಅವರನ್ನು ಭೇಟಿ ಮಾಡುವುದಾಗಿ ದೃಢ ನಿಶ್ಚಯ ಮಾಡಿ ಅವರ ಮನೆಯಾದ ನ್ಯೂಪಡ್ಪು ಕಡೆಗೆ ನಮ್ಮ ಪ್ರಯಾಣ ಸಾಗಿತ್ತು.

ಅಂದಾಜು 06:45ಕ್ಜೆ ಅವರ ಮನೆಯ ದಾರಿ ತಲುಪಿದೆವು. ವರುಣರಾಯನ ಆರ್ಭಟ ಇನ್ನೂ ಜೋರಾಗಿತ್ತು. ಅದಾಗಲೇ ಕಟೀಲಿನಲ್ಲಿ ಸನ್ಮಾನ ಸಮಾರಂಭ ಮುಗಿಸಿ ಮನೆಗೆ ಬಂದಿದ್ದ ಹಾಜಬ್ಬರು. ಆ ಸುರಿಯುತ್ತಿರುವ ಮಳೆಯಲ್ಲಿ ಮನೆಯ ಜಗಲಿಯಲ್ಲಿ ನಮ್ಮನ್ನು ಎದುರುಗೊಂಡರು.

ಅವರ ಮನೆಯ ಅಂಗಳಕ್ಕೆ ಇಳಿದಾಗ ನಮಗೆ ಅದೇನೋ ಪುನೀತ ಭಾವ.ನಮ್ಮನ್ನು ನೋಡಿದ ತಕ್ಷಣ ಅದೇನು ಆದರಾತಿಥ್ಯ…..

ಅದೇ ಸರಳತೆ, ಅದೇ ನಿರ್ಲಿಪ್ತ ಭಾವ, ಅಹಂಕಾರ ಆಡಂಬರದ ಲವಲೇಶವೂ ಸುಳಿವಿಲ್ಲ..ಅದೇ ಪೂರ್ತಿ ಗುಂಡಿ ಹಾಕದ ಶರ್ಟು…

ಮನೆಯೊಳಗೆ ಬಂದ ತಕ್ಷಣ ಹಲವಾರು ಪ್ರಶಸ್ತಿಗಳು ನಮ್ಮ ಕಣ್ಣನ್ನು ಸೆಳೆದವು.

ನನ್ನ ಮನದಲ್ಲಿದ್ದ ಕುತೂಹಲ, ಆಸೆ ಎಂದರೆ ರಾಷ್ಟ್ರಪತಿಯವರು ಕೊಟ್ಟ ಪದ್ಮಶ್ರೀ ಪುರಸ್ಕಾರವನ್ನು ಕಣ್ಣಾರೆ ನೋಡಿ ಮುಟ್ಟಿ ನಮಸ್ಕರಿಸಬೇಕು ಎಂಬುದಾಗಿತ್ತು.

ಕೇವಲ ಟಿವಿಯಲ್ಲಿ ಮಾತ್ರ ಪದ್ಮಶ್ರೀ ಪುರಸ್ಕಾರದ ದೃಶ್ಯಾವಳಿ ನೋಡುತ್ತಿದ್ದ ನನಗೆ ಪದ್ಮಶ್ರೀಯನ್ನು ನೋಡಿದಾಗ ಆದ ಆನಂದ ಹೇಳತೀರದು.

ಹಾಜಬ್ಬರ ಪದ್ಮಶ್ರೀ ಪುರಸ್ಕಾರದ ಹಿಂದಿರುವ ಸಾಧನೆ ಮತ್ತು ಹಳ್ಳಿಯಿಂದ ದಿಲ್ಲಿಯವರೆಗೆ ಆದಂತಹ ಅನುಭವ ಕೇಳಿದಾಗ ರೋಮಾಂಚನವಾಯಿತು.

ಪ್ರಶಸ್ತಿಯ ಬಗ್ಗೆ ಎಂದಿಗೂ ಕನಸು ಕಾಣದೆ ತನ್ನ ಮಹದಾಸೆಯನ್ನು ಈಡೇರಿಸಲು ಪಣತೊಟ್ಟ ಸಾಮಾನ್ಯ ವ್ಯಕ್ತಿಗೆ ಇಂತಹ ಪುರಸ್ಕಾರ ಬಂದಾಗ ಅದರ ಮೌಲ್ಯ ಹೆಚ್ಚಾಗುತ್ತದೆ. ಪ್ರಶಸ್ತಿಗೆ ಹಣ ಶ್ರೀಮಂತಿಕೆ ಮುಖ್ಯವಲ್ಲ ಸಾಧಿಸಲೇಬೇಕೆಂಬ ಛಲ ಒಂದಿದ್ದರೆ ಸಾಕು ಎಂಬುದಕ್ಕೆ ಹಾಜಬ್ಬರೇ ಸಾಕ್ಷಿ.


ಹಾಜಬ್ಬರ ನಿರ್ಮಲ ಮನಸ್ಸು ಸರಳತೆ ಸಹೃದಯತೆ ಮುಗ್ಧತೆ ಸಾಧಿಸುವ ಛಲ ಅಭಿಮಾನಕ್ಕೆ ಶರಣು ಶರಣು. ಇಂತಹ ಹತ್ತಾರು ಹಾಜಬ್ಬರು ನಮ್ಮ ಭಾರತ ಮಾತೆಯ ಒಡಲಿನಲ್ಲಿ ಹುಟ್ಟಿಬರಲಿ ಎಂಬುದೇ ನಮ್ಮೆಲ್ಲರ ಆಶಯ.

ಇವರ ಜೊತೆ ಮಾತನಾಡುವಾಗ ನನಗೆ ಅನಿಸಿದ್ದು ಇಷ್ಟೇ ಇವರಿಂದ ಇನ್ನೂ ನಾನು ಎಷ್ಟೊಂದು ಕಲಿಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು