11:39 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಹೊಣೆ, ಆರೋಪಿಗಳ ಗಲ್ಲಿಗೇರಿಸಿ: ಶಾಸಕ ವೇದ್ಯಾಸ ಕಾಮತ್

01/07/2022, 19:46

ಮಂಗಳೂರು(reporterkarnataka.com): ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ. ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಾಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು