1:56 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕಣ್ಣು ದೃಷ್ಟಿ ತೆಗೆಯುವ ಕೆಸವಳಲು ಕೂಡಿಗೆ: ನವ ವಿವಾಹಿತ ಜೋಡಿಗಳು ಬರುತ್ತಾರೆ ಇಲ್ಲಿಗೆ!

10/10/2022, 13:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಮೂಡಿಗೆರೆ ತಾಲ್ಲೂಕಿನ ಜೊಗಣಕೆರೆ ಗ್ರಾಮದ ಕೆಸವಳಲು ಕೂಡಿಗೆಗೆ ದಕ್ಷಿಣ ಕರ್ನಾಟಕದ ಹೆಚ್ಚಿನ ಜನ ಬರುತ್ತಾರೆ. ಇದು ಕೆಸವಳಲು ಮತ್ತು ಅಬಚೂರು- ಹಾಲೂರು ಮದ್ಯ ಭಾಗದಲ್ಲಿ ಸೇರುವ ಹೇಮಾವತಿ ಮತ್ತು ಜಪವಾತಿ ನದಿ ಸೇರುವ ಸ್ಥಳಕ್ಕೆ ಕೂಡಿಗೆ ಅನ್ನುತ್ತಾರೆ. ಇಲ್ಲಿ ರಾಮ ದೇವಸ್ಥಾನ ಇದೇ. ಹಾಗೆ ನದಿಗಳು ಸೇರುವ ಜಾಗದಲ್ಲಿ ಆಸ್ರಕೊಂಡ ಇದೇ ಅದೆ ರೀತಿ ಅನಾದಿಕಾಲದಿಂದಲೂ ಕಣ್ಣು ದೃಷ್ಟಿ ತೆಗೆಯುವ ವಿಧಿವಿಧಾನವಿದೆ.

ದೃಷ್ಟಿ ದೋಷ ಆಗುವುದು ನೀಜವಾದರೆ ತೆಗೆಯುವುದು ನಿಜ. ವಿಶೇಷವಾಗಿ ನವ ವಿವಾಹ ಜೋಡಿಗಳು ದೃಷ್ಟಿ ಆಗಿರುತ್ತದೆ ಎಂದು ಹಾಗೆ ಇಲ್ಲಿ ಪ್ರತಿ ವರ್ಷದಲ್ಲಿ ಒಂದೆರಡು ಬಾರಿ ಬಂದು ವ್ಯಾಪಾರ ವಹಿವಾಟುದಾರರು ದೃಷ್ಟಿ ತೆಗೆಸಿಕೊಳ್ಳಲು ಎಲ್ಲಾ ಧರ್ಮದವರು (ಮುಸ್ಲಿಮ್ ಮತ್ತು ಕ್ರೀಶ್ಚಿಯನ್) ಸೇರಿದಂತೆ ಲಕ್ಷಾಂತರ ಜನ ಬಂದು ಹೋಗುತ್ತಾರೆ.

ಹೊಸ ವಾಹನಗಳಿಗೆ ವಿಶೇಷವಾಗಿ ದೃಷ್ಟಿ ಪೊಜೆ , ನವ ಜೋಡಿಗಳಿಗೆ ಬಾಸಿಂಗ ಪೊಜೆ , ಮನೆಯ ಹಾಗೂ ತೋಟದ ಮಣ್ಣು ತಂದು ದೃಷ್ಟಿ ಪೊಜೆ ಮಾಡುತ್ತಾರೆ , ನಿಮಗೆ ಆಗಿರುವ ದೃಷ್ಟಿ ದೋಷ ತೆಗೆಯಲು ನೀವು ಹೋಗಿ ಬನ್ನೀ.


ಇಲ್ಲಿ ಗದ್ದೆ ಕುಯ್ಯುವ ಮೂದಲು ಅಂದರೆ ಹಸಿರು ಫಲ ಕಟಾವು ಮಾಡುವ ಮೊದಲು ಪೊಜೆ ಮಾಡಿಸಿದರೆ ಉತ್ತಮ ಎಂಬ ವಾಡಿಕೆ ಇದೇ
ಹಾಗೆ ಇಲ್ಲಿ ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ,ಸಾವಿರಾರು ಜನ ಬರುವ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ , ಕ್ಯಾಂಟಿನ್ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,ಪೂಜೆಗೆ ಒಂದು ಬಾರಿಗೆ ಹತ್ತು ಕುಟುಂಬ ಗಳಿಗೆ ಅವಕಾಶ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು