11:29 AM Wednesday11 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕಾಂತಾರ: ಚಾಪ್ಟರ್ 1 ಸಿನಿಮಾ ತಂಡ ಷರತ್ತು ಉಲ್ಲಂಘಿಸಿದರೆ ಚಿತ್ರೀಕರಣ ಸ್ಥಗಿತ: ಅರಣ್ಯ ಸಚಿವ ಖಂಡ್ರೆ ಎಚ್ಚರಿಕೆ

21/01/2025, 09:37

ಬೆಂಗಳೂರು(reporterkarnataka.com): ಹಾಸನದ ಸಕಲೇಶಪುರ ಬಳಿಯ ಯಸಳೂರು ವಲಯದ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಂತಾರ: ಚಾಪ್ಟರ್ 1 ಸಿನಿಮಾ ಚಿತ್ರೀಕರಣ ವೇಳೆ
ಷರತ್ತು ಉಲ್ಲಂಘನೆ ಮಾಡಿದ್ದಲ್ಲಿ ಚಿತ್ರೀಕರಣವನ್ನು
ನಿರ್ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ಶನಿವಾರಸಂತೆ ಬಳಿಯ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಸಿನಿಮಾದ ಶೂಟಿಂಗ್ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ಈಶ್ವರ ಬಿ. ಖಂಡ್ರೆ ಅವರು, ‘ಕಾಂತಾರ: ಚಾಪ್ಟರ್​ 1’ ಚಿತ್ರತಂಡದವರು ಒಂದು ವೇಳೆ ಷರತ್ತು ಉಲ್ಲಂಘನೆ ಮಾಡಿದ್ದರೆ ಚಿತ್ರೀಕರಣವನ್ನು ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಸಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯವರು ಅನುಮತಿ ಕೋರಿದ್ದರು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಆದರೆ ಕಾಂತಾರ ಚಿತ್ರತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು