2:12 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕಾಂತಾವರ: ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೇ ಜಯಂತಿ ಮಹೋತ್ಸವ

09/09/2022, 13:16

ಕಾಂತಾವರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕದಳಿ ಮಹಿಳಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾದ ವತಿಯಿಂದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರೂವಾರಿಯಾದ ಸೂತ್ತೂರು ಬ್ರಹ್ನಮಠದ ಲಿಂಗೈಕ್ಯ ಡಾ.ಶ್ರೀ ಶಿವರಾತ್ರೇಶ್ವರ ರಾಜೇಂದ್ರ ಮಹಾಸ್ವಾಮಿಗಳವರ 107ನೆಯ ಜಯಂತಿ ಮಹೋತ್ಸವ ಆಚರಿಸಲಾಯಿತು. 

ದಕ್ಷಿಣ ಕನ್ನಡ ಜಿಲ್ಲೆಯ “ಕದಳಿ ಮಹಿಳಾ ವೇದಿಕೆ”ಯ ಅಧ್ಯಕ್ಷರಾದ ಸುರೇಖಾ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, 12ನೆಯ ಶತಮಾನದ ಬಸವಾದಿ ಶರಣರ “ಅನುಭವ ಮಂಟಪ”ವು ವರ್ಗ ಭೇದ, ವರ್ಣಭೇದಗಳನ್ನು ತೊಡೆದು ಸಮಾನತೆಯ ಬೀಜ ಬಿತ್ತಿತ್ತು. ಪ್ರಸ್ತುತ ಸಮಾಜದ ಸಂಘರ್ಷಗಳು ನಾಡಿನ ಸಂಸ್ಕೃತಿಯನ್ನು ಹಾಳುಗೆಡಹುತ್ತೀವೆ. ಸಮಾಜದ ಉನ್ನತಿಗೆ ಪೂರಕವಾದ ಬಸವ ತತ್ವಗಳನ್ನು ಪ್ರಚಾರಗೊಳಿಸಿ ಸಮಾಜದಲ್ಲಿ ಸಹಬಾಳ್ವೆಯ ಜೀವನಕ್ಕೆ ಸಂಘಗಳು ಕಾರ್ಯನಿರ್ವಹಿಸಬೇಕೆಂದರು. 

ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತನ ಇಸ್ಮತ್ ಜಹಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಎಲ್ಲ ಧರ್ಮ ಮಂತ್ರ ಒಂದೇ ಸಮಾನತೆ. ಜನರ ಜೀವನಶೈಲಿ ನೈಸರ್ಗಿಕವಾಗಿಲ್ಲದ ಕಾರಣ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ನಮ್ಮ  ಸ್ವಾಸ್ಥ್ಯವನ್ನು ಕಾಪಾಡಿಕೂಳ್ಳುವುರೊಂದಿಗೆ ಸಮಾಜದ ಹಿತ ಕಾಪಾಡಬೇಕೆಂದರು. 


ಉಪನ್ಯಾಸ ನೀಡಲು ಬಂದಿದ್ದ ಸುಜೀರು ಶಾಲೆಯ ಮುಖ್ಯ ಶಿಕ್ಷಕಿ ಸಂಸ್ಥಾಪಕರು ಸಮಾಜಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸುತ್ತಾ ಈಗಿನ ಯುವ ಪೀಳಿಗೆ ಶರಣ ತತ್ವಗಳನ್ನು ಅನುಸರಿಸಬೇಕು. ಅವಿಭಕ್ತ ಕೂಡು ಕುಟುಂಬದಲ್ಲಿ ಭದ್ರತೆಯಿಂದ ಸಮಾಜಮುಖಿ ಜೀವನ ನಡೆಸಬೇಕಂದರು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ವಚನ ಚಿಂತನೆ, ಗಾದೆಮಾತು, ಒಗಟು, ಒಡಪು, ರಸಪ್ರಸ್ನೆ, ಇತ್ಯಾದಿ ಸಾಂಸ್ಕೃತಿಕ ಚಟುವಟಿಕೆಗಳು ಸಾಂಗವಾಗಿ ನೆರವೇರಿದವು. ನಂತರ ಮಹಾಪ್ರಸಾದದೊಂದಿಗೆ ಕಾರ್ಯಕ್ರಮವು ಮಂಗಲಗೊಂಡು ಸಂಪನ್ನಗೊಂಡಿತ್ತು,

ಇತ್ತೀಚಿನ ಸುದ್ದಿ

ಜಾಹೀರಾತು