6:21 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಕಾನೂನು ಅರಿಯದೆ ಇರುವುದೇ ಅಪರಾಧ: ಎನ್ನೆಸ್ಸೆಸ್ ಯುವ ಸಪ್ತಾಹದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವರ್ಣೇಕರ್

17/01/2022, 22:22

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ,  ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಯುವ ಜನತೆಯಲ್ಲಿ ಕಾನೂನಿನ ಅರಿವು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪೃಥ್ವೀರಾಜ್ ವರ್ಣೇಕರ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾನೂನು ಅನ್ನೋದು ಸಾಮಾನ್ಯ ಜ್ಞಾನ. ಅದನ್ನು ಅರಿಯದೇ ಇರುವುದೇ ಅಪರಾಧ. ಸಂವಿಧಾನವನ್ನು ಓದುವುದೇ ಧರ್ಮ ಎಂದು ಹೇಳಿದರು. 

ಬೇರೆ ಜಿಲ್ಲೆಗೆ ಹೋಲಿಸಿದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಯುವ ಪೀಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುದರಲ್ಲಿ ಹಿಂದೆ ಉಳಿದಿದ್ದಾರೆ.ಎಂದು ಅವರು ಖೇದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ದ.ಕ. ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಯುವ ಸಪ್ತಾಹವನ್ನು ನಡೆಸುತ್ತಿದೆ .ಯುವ ಸಮುದಾಯ ವಿವೇಕಾನಂದರ ತತ್ವ ಆದರ್ಶಗಳ್ಳನ್ನು ಮೈಗೂಡಿಸಿಕೊಳ್ಳಿ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಿವಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಹರೀಶ್ ವಹಿಸಿದ್ದರು.

ಯೋಜನಾಧಿಕಾರಿಗಳಾದ ಡಾ. ಸುರೇಶ್, ಡಾ. ಗಾಯತ್ರಿ ಉಪಸ್ಥಿತರಿದ್ದರು.

ವಿವಿ ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು