3:45 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ? ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ?: ಶಾಸಕ ಪೂಂಜ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

25/05/2024, 14:30

ಮಂಗಳೂರು(reporterkarnataka.com): ಕಾನೂನು ಎಲ್ಲರಿಗೂ ಒಂದೇ ಅಲ್ವೇನ್ರೀ?. ಎಂಎಲ್ ಎ ಅಂತ ಬಿಟ್ಟು ಬಿಡೋಕೆ ಆಗುತ್ತಾ? ಎಂಎಲ್ ಎ ಅಂತ ಪೊಲೀಸರ ಮೇಲೆ ಗಲಾಟೆ ಮಾಡೋಕೆ ಆಗುತ್ತಾ?
ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಜತೆ ಅವರು ಮಾತನಾಡಿದರು‌.
ಶಾಸಕ ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಐಪಿಸಿ ಸೆಕ್ಷನ್ 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದು ನಾನ್ ಬೇಲೇಬಲ್ ಅಫೆನ್ಸ್. ಈ ಪ್ರಕರಣ ಬೇಲೆಬಲ್ ಅಫೆನ್ಸ್ ಅಲ್ಲ. ಇದರಲ್ಲಿ 7 ವರ್ಷ ಜೈಲು ಶಿಕ್ಷೆಯಾಗುತ್ತದೆ. ಎಂಎಲ್ ಎ ಅಂತ ಅವರನ್ನು ಬಿಟ್ಟು ಬಿಡೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಹರೀಶ್ ಪೂಂಜ ವಿರುದ್ಧ ಎರಡು ಪ್ರಕರಣಗಳಿವೆ. ಅವರು ಯಾರ ಪರವಾಗಿ ಗಲಾಟೆ ಮಾಡಿದ್ದಾರೆ ಗೊತ್ತಾ ಎಂದು ಸಿಎಂ ಮರುಪ್ರಶ್ನೆ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು