5:07 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಕನ್ಯಾಕುಮಾರಿ ಟು ಕಾಶ್ಮೀರ: ಕಾಂಗ್ರೆಸ್ ‘ಭಾರತ್ ಜೋಡೋ’ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ

08/09/2022, 19:06

ಚೆನ್ನೈ(reporterkarnataka.com): ಮುಂಬರುವ ಸಂಸತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಬೃಹತ್ ಜನಸಂಪರ್ಕ ಕಾರ್ಯಕ್ರಮ ‘ಭಾರತ್ ಜೋಡೋ ಯಾತ್ರೆ’ಗೆ ಗುರುವಾರ ಕನ್ಯಾಕುಮಾರಿಯಿಂದ ಚಾಲನೆ ನೀಡಿದರು. 150 ದಿನಗಳಲ್ಲಿ 3,500 ಕಿ.ಮೀ ದೂರ ಪಾದಯಾತ್ರೆ ಸಾಗಲಿದೆ.


ಯಾತ್ರೆಯ ಇಂದಿನ ಪ್ರಮುಖ ಅಂಶಗಳು

*ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ರಾಹುಲ್ ಗಾಂಧಿ ತಮ್ಮ ಯಾತ್ರೆ ಪ್ರಾರಂಭಿಸಿದರು.

* ನಂತರ ಟ್ವೀಟ್ ಮಾಡಿದ ರಾಹುಲ್ ಗಾಂಧಿ, ದ್ವೇಷ ಮತ್ತು ವಿಭಜನೆಯ ರಾಜಕೀಯದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಆದರೆ ಇದಕ್ಕಾಗಿ ನಾನು ನನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳುವುದಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ, ಭರವಸೆಯು ಭಯವನ್ನು ಸೋಲಿಸುತ್ತದೆ, ನಾವು ಒಟ್ಟಾಗಿ ಜಯಿಸುತ್ತೇವೆ ಎಂದು ಹೇಳಿದರು.

* ಬಿಜೆಪಿ ಆಡಳಿತದಡಿಯಲ್ಲಿ ಸಾಮಾಜಿಕ ಧ್ರುವೀಕರಣ ಮತ್ತು ರಾಜಕೀಯ ಕೇಂದ್ರೀಕರಣವನ್ನು ಆರೋಪಿಸಿದ ರಾಹುಲ್ ಗಾಂಧಿ, ‘ಭಾರತ್ ಜೋಡೋ ಯಾತ್ರೆ’ ದೇಶವನ್ನು ಒಗ್ಗೂಡಿಸಲು ತನಗೆ ತಪಸ್ಸು ಇದ್ದಂತೆ ಎಂದು ಈ ಹಿಂದೆ ಹೇಳಿದರು

*  ಯಾವುದೇ ರಾಜಕೀಯ ದೃಷ್ಟಿಕೋನವನ್ನು ನಿರಾಕರಿಸಿದರು. ಯಾತ್ರೆಯು ದೇಶವನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು