5:22 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಕಪಿಲಾ ನದಿ ಪ್ರವಾಹ: ಶ್ರೀ ಮಲ್ಲನ ಮೂಲೆ ಮಠದ ಬಳಿ ರಸ್ತೆಗೆ ನುಗ್ಗಿದ ನೀರು; ನಂಜನಗೂಡು-ಮೈಸೂರು ಹೆದ್ದಾರಿ ಬಂದ್

19/07/2024, 14:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿ ಪ್ರವಾಹದಿಂದ ನಂಜನಗೂಡು-ಮೈಸೂರು ಹೆದ್ದಾರಿ ಬಂದ್ ಆಗಿದೆ.
ಕೇರಳದ ವಯನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಿದೆ. ಇದರಿಂದಾಗಿ ಕಪಿಲ ನದಿ ತೀರದಲ್ಲಿ ಹಾದು ಹೋಗಿರುವ ಮೈಸೂರು- ನಂಜನಗೂಡು ಹೆದ್ದಾರಿಯಲ್ಲಿ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ಬಳಿ ನದಿಯ ಪ್ರವಾಹ ರಸ್ತೆಗೆ ಹರಿದು ಬಂದು ರಸ್ತೆ ಸಂಪೂರ್ಣ ಮುಳುಗಿಹೋಗಿದೆ. ಇದರ ಪರಿಣಾಮ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸಲು ಆಗದೆ ರಸ್ತೆಯನ್ನು ಬಂದ್ ಮಾಡಲಾಗಿದೆ.


ಈ ಹಿನ್ನಲೆ ಮೈಸೂರು ಚಾಮರಾಜನಗರ ನಂಜನಗೂಡು ಗುಂಡ್ಲುಪೇಟೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ರಾಜ್ಯದ ವಾಹನ ಸವಾರರಿಗೆ ತುಂಬಾ ತೊಂದರೆಯಾಗಿದೆ.
ನಂಜನಗೂಡು- ಮೈಸೂರು ಹೆದ್ದಾರಿ ಬಂದ್ ಮಾಡಿ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದಾಗಿ ಕೇವಲ ಒಂದು ಕಿಲೋಮೀಟರ್ ರಸ್ತೆಗೆ ಬದಲಾಗಿ ಸುಮಾರು ಹದಿನೈದರಿಂದ ಇಪ್ಪತ್ತು ಕಿಲೋಮೀಟರ್ ರಸ್ತೆ ಬಳಸುವಂತಾಗಿದೆಯಲ್ಲದೆ. ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು