3:57 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಕಪಿಲಾ ನದಿಯಲ್ಲಿ ಏರುತ್ತಿರುವ ನೀರಿನ ಮಟ್ಟ: ನಂಜನಗೂಡು ಪರಶುರಾಮ ದೇಗುಲ ಜಲಾವೃತ

17/07/2024, 15:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದರಿಂದ ಇಂದು ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಕಪಿಲಾ ನದಿ ತೀರದಲ್ಲಿರುವ ಪರಶುರಾಮ ದೇವಾಲಯ ಜಲಾವೃತಗೊಂಡಿದೆ. ಇದರೊಂದಿಗೆ ಶ್ರೀ ನಂಜುಂಡಸ್ವಾಮಿ ದೇವಾಲಯದ ಸ್ನಾನಘಟ್ಟ, ಮುಡಿಕಟ್ಟೆ ಸಹಾ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ.
ಮೈದುಂಬಿ ಹರಿಯುತ್ತಿರುವ ಕಪಿಲಾ ನದಿಯನ್ನು ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯ ಜನರು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟದ ಬಳಿ ಆಗಮಿಸುತ್ತಿದ್ದು , ನದಿ ಬಳಿಗೆ ಜನರು ತೆರಳದಂತೆ ಪೊಲೀಸರು ಧ್ವನಿ ವರ್ಧಕದ ಮೂಲಕ ಎಚ್ಚರಿಕೆ ನೀಡುತ್ತಿದ್ದರೂ ಆಗಮಿಸುತ್ತಿರುವ ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗುತ್ತಿದೆ.


ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯದ ಬಳಿ ನದಿ ದಡದಲ್ಲಿ ಹಗ್ಗ ಕಟ್ಟಿ, ಬ್ಯಾರಿಕೇಡ್ ಹಾಕಿ ಅಪಾಯದ ಕುರಿತು ಸಂದೇಶ ನೀಡುವ ಮೂಲಕ ಜನರು ನದಿ ನೀರಿನಲ್ಲಿ ಮುಂದೆ ಸಾಗದಂತೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಿ ನೀರಿನ ಹೊರ ಹರಿವು ಹೆಚ್ಚಳವಾಗುವ ಸಾಧ್ಯತೆಯಿರುವುದರಿಂದ ನಗರದ ಹಳ್ಳದಕೇರಿ ನಿವಾಸಿಗಳಿಗೆ ನಗರಸಭೆಯಿಂದ ಮುನ್ನೆಚ್ಚರಿಕೆ ನೀಡಲಾಗಿದ್ದು , ಜೊತೆಗೆ ತಾತ್ಕಾಲಿಕ ಗಂಜಿ ಕೇಂದ್ರವನ್ನು ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು