1:11 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಪಿಲಾ ನದಿಯಲ್ಲಿ ಏರುತ್ತಿರುವ ನೀರಿನ ಮಟ್ಟ: ನಂಜನಗೂಡು ಪರಶುರಾಮ ದೇಗುಲ ಜಲಾವೃತ

17/07/2024, 15:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದರಿಂದ ಇಂದು ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಕಪಿಲಾ ನದಿ ತೀರದಲ್ಲಿರುವ ಪರಶುರಾಮ ದೇವಾಲಯ ಜಲಾವೃತಗೊಂಡಿದೆ. ಇದರೊಂದಿಗೆ ಶ್ರೀ ನಂಜುಂಡಸ್ವಾಮಿ ದೇವಾಲಯದ ಸ್ನಾನಘಟ್ಟ, ಮುಡಿಕಟ್ಟೆ ಸಹಾ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ.
ಮೈದುಂಬಿ ಹರಿಯುತ್ತಿರುವ ಕಪಿಲಾ ನದಿಯನ್ನು ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯ ಜನರು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟದ ಬಳಿ ಆಗಮಿಸುತ್ತಿದ್ದು , ನದಿ ಬಳಿಗೆ ಜನರು ತೆರಳದಂತೆ ಪೊಲೀಸರು ಧ್ವನಿ ವರ್ಧಕದ ಮೂಲಕ ಎಚ್ಚರಿಕೆ ನೀಡುತ್ತಿದ್ದರೂ ಆಗಮಿಸುತ್ತಿರುವ ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗುತ್ತಿದೆ.


ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯದ ಬಳಿ ನದಿ ದಡದಲ್ಲಿ ಹಗ್ಗ ಕಟ್ಟಿ, ಬ್ಯಾರಿಕೇಡ್ ಹಾಕಿ ಅಪಾಯದ ಕುರಿತು ಸಂದೇಶ ನೀಡುವ ಮೂಲಕ ಜನರು ನದಿ ನೀರಿನಲ್ಲಿ ಮುಂದೆ ಸಾಗದಂತೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಿ ನೀರಿನ ಹೊರ ಹರಿವು ಹೆಚ್ಚಳವಾಗುವ ಸಾಧ್ಯತೆಯಿರುವುದರಿಂದ ನಗರದ ಹಳ್ಳದಕೇರಿ ನಿವಾಸಿಗಳಿಗೆ ನಗರಸಭೆಯಿಂದ ಮುನ್ನೆಚ್ಚರಿಕೆ ನೀಡಲಾಗಿದ್ದು , ಜೊತೆಗೆ ತಾತ್ಕಾಲಿಕ ಗಂಜಿ ಕೇಂದ್ರವನ್ನು ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು