12:57 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ

28/08/2024, 01:49

ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಬಂಧಿತ ಆರೋಪಿಯನ್ನು ಕಾರ್ಕಳ ತೆಲ್ಲರು ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಮೊದಲ ಆರೋಪಿ ಅಲ್ತಾಫ್​ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್​ನನ್ನು ಬಂಧಿಸಿದ್ದೇವೆ. ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನಿಸಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್​ ಅವರು ಹೇಳಿದ್ದಾರೆ.
ಬಂಧಿತ ಅಭಯನನ್ನು ನಾಳೆ ಗುರುವಾರ ಕೋರ್ಟಿಗೆ ಹಾಜರುಪಡಿಸಲಾಗುವುದು. ಬಳಿಕ ಕಸ್ಟಡಿಗೆ ಪಡೆದುಕೊಂಡು, ಆತನನ್ನು ವಿಚಾರಣೆ ನಡೆಸಲಾಗುವುದು
ಎಂದು ಅವರು ನುಡಿದರು.ಎನ್ ಡಿಪಿಎಸ್ ಪ್ರಕರಣದಲ್ಲಿ ಅಭಯ್​ನನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್​ಪಿ ನುಡಿದರು.
ಬಂಧಿತ ಆರೋಪಿ ಅಭಯ್ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎನ್ನಲಾಗಿದೆ.
ಅಭಯ್ ಈ ಹಿಂದೆ ಟಿಪ್ಪರ್ ಖರೀದಿಸಿದ್ದ. ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಆತ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು