2:45 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ

28/08/2024, 01:49

ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಬಂಧಿತ ಆರೋಪಿಯನ್ನು ಕಾರ್ಕಳ ತೆಲ್ಲರು ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಮೊದಲ ಆರೋಪಿ ಅಲ್ತಾಫ್​ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್​ನನ್ನು ಬಂಧಿಸಿದ್ದೇವೆ. ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನಿಸಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್​ ಅವರು ಹೇಳಿದ್ದಾರೆ.
ಬಂಧಿತ ಅಭಯನನ್ನು ನಾಳೆ ಗುರುವಾರ ಕೋರ್ಟಿಗೆ ಹಾಜರುಪಡಿಸಲಾಗುವುದು. ಬಳಿಕ ಕಸ್ಟಡಿಗೆ ಪಡೆದುಕೊಂಡು, ಆತನನ್ನು ವಿಚಾರಣೆ ನಡೆಸಲಾಗುವುದು
ಎಂದು ಅವರು ನುಡಿದರು.ಎನ್ ಡಿಪಿಎಸ್ ಪ್ರಕರಣದಲ್ಲಿ ಅಭಯ್​ನನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್​ಪಿ ನುಡಿದರು.
ಬಂಧಿತ ಆರೋಪಿ ಅಭಯ್ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎನ್ನಲಾಗಿದೆ.
ಅಭಯ್ ಈ ಹಿಂದೆ ಟಿಪ್ಪರ್ ಖರೀದಿಸಿದ್ದ. ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಆತ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು