5:22 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ

28/08/2024, 01:49

ಕಾರ್ಕಳ(reporterkarnataka.com): ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 3ಕ್ಕೇರಿದೆ.
ಬಂಧಿತ ಆರೋಪಿಯನ್ನು ಕಾರ್ಕಳ ತೆಲ್ಲರು ನಿವಾಸಿ ಅಭಯ್ (23) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಮೊದಲ ಆರೋಪಿ ಅಲ್ತಾಫ್​ಗೆ ಮಾದಕ ವಸ್ತುವನ್ನು ಕೊಟ್ಟಿರುವ ಆರೋಪದ ಮೇಲೆ ಅಭಯ್​ನನ್ನು ಬಂಧಿಸಿದ್ದೇವೆ. ಇದರೊಂದಿಗೆ ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನಿಸಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್​ ಅವರು ಹೇಳಿದ್ದಾರೆ.
ಬಂಧಿತ ಅಭಯನನ್ನು ನಾಳೆ ಗುರುವಾರ ಕೋರ್ಟಿಗೆ ಹಾಜರುಪಡಿಸಲಾಗುವುದು. ಬಳಿಕ ಕಸ್ಟಡಿಗೆ ಪಡೆದುಕೊಂಡು, ಆತನನ್ನು ವಿಚಾರಣೆ ನಡೆಸಲಾಗುವುದು
ಎಂದು ಅವರು ನುಡಿದರು.ಎನ್ ಡಿಪಿಎಸ್ ಪ್ರಕರಣದಲ್ಲಿ ಅಭಯ್​ನನ್ನು ಬಂಧಿಸಲಾಗಿದೆ. ಇನ್ನು ಇಬ್ಬರು ಶಂಕಾಸ್ಪದ ವ್ಯಕ್ತಿಗಳನ್ನು ವಶಪಡಿಸಿಕೊಂಡಿರುತ್ತೇವೆ. ಅವರ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸ್​ಪಿ ನುಡಿದರು.
ಬಂಧಿತ ಆರೋಪಿ ಅಭಯ್ ಬಿಜೆಪಿ ಮತ್ತು ಭಜರಂಗದಳದ ಕಾರ್ಯಕರ್ತ ಎನ್ನಲಾಗಿದೆ.
ಅಭಯ್ ಈ ಹಿಂದೆ ಟಿಪ್ಪರ್ ಖರೀದಿಸಿದ್ದ. ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪನಿ ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಆತ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು