5:22 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಕರಕುಶಲ ಕರ್ಮಿಗಳಿಗೆ ಪ್ರೊತ್ಸಾಹ: 10 ದಿನಗಳ ಬೆಂಗಳೂರು ಉತ್ಸವಕ್ಕೆ ಚಾಲನೆ; ಬನ್ನಿ, ನೋಡಲು ನೀವೂ ಬನ್ನಿ!

07/08/2021, 08:57

ಬೆಂಗಳೂರು(reporterkarnataka.com); ಕೊರೊನಾ ಲಾಕ್‌ಡೌನ್‌ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ಆಯೋಜಿಸಲಾಗಿರುವ ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಲಾಯಿತು. 


ಬೆಂಗಳೂರು ಉತ್ಸವಕ್ಕೆ ಚಾಲನೆ ನೀಡಿದ ನಟಿ ಶುಭಾ ಶೆಟ್ಟಿ ಮಾತನಾಡಿ, ಕೊರೊನಾ ಕಾಲದಲ್ಲಿ ಎಲ್ಲರಿಗೂ ಸಂಕಷ್ಟ ಅನುಭವಿಸಿದ್ದಾರೆ. ಅದರಲ್ಲೂ ಕರಕುಶಲಕರ್ಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ತೊಂದರೆಗೀಡಾಗಿದ್ದರು. ಅವರಿಗೆ ಮಾರುಕಟ್ಟೆಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ಉತ್ಸವದಲ್ಲಿ ಪಾಲ್ಗೊಂಡು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಿ ಎಂದು ಮನವಿ ಮಾಡಿದರು. 


ಈ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಗಸ್ಟ್‌ 15 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕರೋನಾ ಸಾಂಕ್ರಾಮಿಕ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 


ಕಾರ್ಯಕ್ರಮದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್‌. ಶಂಕರ್‌, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಗಳಾದ ಪ್ರೊ. ಕೆ.ಎಸ್‌. ಅಪ್ಪಾಜಯ್ಯ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು