12:41 AM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

12/10/2024, 22:20

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು.
ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆ ನೀಡಿದರು.
“ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು