9:03 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

12/10/2024, 22:20

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು.
ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆ ನೀಡಿದರು.
“ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು