6:03 AM Tuesday22 - October 2024
ಬ್ರೇಕಿಂಗ್ ನ್ಯೂಸ್
ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ…

ಇತ್ತೀಚಿನ ಸುದ್ದಿ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

12/10/2024, 22:20

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು.
ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆ ನೀಡಿದರು.
“ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು