2:36 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

12/10/2024, 22:20

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು.
ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆ ನೀಡಿದರು.
“ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು