6:07 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ

12/10/2024, 22:20

ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು.
ಗುರುದೀಕ್ಷೆ ಪಡೆದ ಉಪಯಾಜಕರು: ವಂ. ಮ್ಯಾಕ್ಸಿಮ್ ಮಾರ್ಟಿನ್ ಡಿಸೋಜ, ವಂ. ಜೋಸ್ವಿನ್ ಪಿರೇರಾ, ವಂ. ಕಿರಣ್ ಲೀಮಾ, ಹಾಗೂ ವಂ. ವಿಲ್ಸನ್ ಸಲ್ಡಾನ್ಹಾ. ತಮ್ಮ ಪ್ರಭೊಧನೆಯಲ್ಲಿ ಓರ್ವ ಯಾಜಕನು ಕ್ರಿಸ್ತನ ರಾಯಭಾರಿಗಾಗಿ ತಮ್ಮ ಜೀವನದಲ್ಲಿ ಕ್ರಿಸ್ತನು ಸಾರಿದ ಮೌಲ್ಯಗಳನ್ನು ಪ್ರತಿಬಿಂಬಿಸಲು ಕರೆ ನೀಡಿದರು.
“ದೇವರಿಂದ ಅಭಿಷಿಕ್ತನಾದವನ ಬಲವೇ ದೇವರ ಸಾನಿಧ್ಯ. ನಾವು ಕ್ರಿಸ್ತನಂತಾಗಲು ಕ್ರಿಸ್ತನ ಜೀವನ ಮತ್ತು ಕಾಯಕವನ್ನು ಅನುಸರಿಸುವ ಯಾಜಕರಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರಾಂತ್ಯಾಧಿಕಾರಿಗಳಾದ ವಂದನೀಯ ಸ್ವಾಮಿ ಡಯನೀಶಿಯಸ್ ವಾಸ್, ಫಾತಿಮಾ ಧ್ಯಾನ ಮಂದಿರದ ಮುಖ್ಯಗುರುಗಳಾದ ವಂದನೀಯ ಸ್ವಾಮಿ ಅನಿಲ್ ಡಿಮೆಲ್ಲೊ ಹಾಗೂ ನೂರಕ್ಕೂ ಹೆಚ್ಚು ಗುರುಗಳು ಹಾಗೂ ಕನ್ಯಾಸ್ತಿಯರು ಹಾಜರಿದ್ದರು. ವಂದನೀಯ ಸ್ವಾಮಿ ವಿಶ್ವಾಸ್ ಮಿಸ್ಕಿತ್ರವರು ಬಲಿಪೂಜೆಯ ನಿರ್ವಹಣೆಯನ್ನು ನೋಡಿಕೊಂಡರು. ವಂದನೀಯ ಸ್ವಾಮಿ ಲೆಸ್ಟನ್ ಲೋಬೊರವರು ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ನೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು