3:01 PM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು