8:09 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು