2:12 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು