2:14 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು