10:35 PM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು