2:23 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು