3:22 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು