8:17 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು