12:34 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ದಕ್ಷಿಣ ಕನ್ನಡ ಜಿಲ್ಲಾ ಇಂಟಕ್ ಸಂಪೂರ್ಣ ಬೆಂಬಲ

04/10/2024, 21:44

ಮಂಗಳೂರು(reporterkarnataka.com):ಕರಾವಳಿ ಭಾಗದ ಜನರ ಹಾಗೂ ಸಂಘಟನೆಗಳ ಸಾಕಾರದೊಂದಿಗೆ “ಕರಾವಳಿ ಹೈಕೋರ್ಟ್ ಪೀಠ” ಸ್ಥಾಪನೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಮಂಗಳೂರು ವಕೀಲರ ಸಂಘ ದೊಡ್ಡ ಮಟ್ಟದ ಹೋರಾಟಕ್ಕೆ ಹೆಜ್ಜೆಯ ನೀಡುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಇರತಕ್ಕಂತಹ ಎಲ್ಲಾ ಸಂಘಟನೆಗಳ ಸಂಸ್ಥೆಗಳ ಬೆಂಬಲವನ್ನು ಕೋರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇಂದು ಬಲಿಷ್ಠ ಕಾರ್ಮಿಕ ಸಂಘಟನೆ ಇಂಟಕ್ ಬೆಂಬಲವನ್ನು ಕೇಳುವ ದೃಷ್ಟಿಯಲ್ಲಿ ಪೀಠದ ಹೋರಾಟ ಸಮಿತಿಯ ಸದಸ್ಯರು ಕೇಂದ್ರ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದರು.

ಈ ಸಭೆಯಲ್ಲಿ ಸಮಿತಿಯ ಸಂಚಾಲಕರಾದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವಕೀಲರ ಸಂಘದ ಅಧ್ಯಕ್ಷ ಎಚ್. ವಿ ರಾಘವೇಂದ್ರ, ಹಿರಿಯ ವಕೀಲರಾದ ಎಂ.ಪಿ. ನೋರೊನ್ನ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್, ಕಾರ್ಯದರ್ಶಿ ವೀರೇಂದ್ರ ಸಿದ್ದಕಟ್ಟೆ, ಇಂಟಕ್ ಜಿಲ್ಲಾಧ್ಯಕ್ಷ ಮನೋಹರ್ ಶೆಟ್ಟಿ ರಾಜ್ಯ ಉಪಾಧ್ಯಕ್ಷರಾದ ಸುರೇಶ್ ಬಿ ಕೆ, ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ನಾಯಕರಾದ ಬಿಚ್ಚು ಕೊಯ ಪಣಂಬೂರು, ವಿಲ್ಫ್ರೆಡ್ ಪಿಂಟೋ, ವಿನೋದ್ ರಾಜ್, ಪುನೀತ್ ಶೆಟ್ಟಿ, ಶಿಪಾಲ್ ರಾಜ್, ಪದ್ಮ ಸ್ಮಿತ್ ಜೈನ್, ಸಿದ್ದಿಕ್ ಹಸನ್, ದಿನೇಶ್ ಗುರುನಗರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಹೊಸಮನೆ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಜ್ಯೋತಿ, ವಕೀಲರಾದ ಸುಮನಾ ಶರಣ್, ದಿವಾಕರ್, ಜಗದೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು