10:18 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕರಾವಳಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಆಡಳಿತ ಮಂಡಳಿ ವಿರುದ್ದ ಸೂಕ್ತ ಕ್ರಮಕ್ಕೆ  ಎಸ್ಎಫ್ಐ ಒತ್ತಾಯ

19/03/2022, 11:24

ಮಂಗಳೂರು(reporterkarnataka.com): ನಗರದ ಕರಾವಳಿ ಕಾಲೇಜು ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ನ ವಿದ್ಯಾರ್ಥಿ ಭರತ್ ಭಾಸ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು  ಭಾರತ ವಿದ್ಯಾರ್ಥಿ ಫೆಡರೇಶನ್( SFI) ದ.ಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕಾಲೇಜು ಸಮಸ್ಯೆಗಳಿಂದ ಮನನೊಂದು ತನ್ನ ಸಾವಿಗೆ ಕಾಲೇಜಿನ ಅವ್ಯವಸ್ಥೆಯೇ ಕಾರಣವೆಂದು ಪತ್ರ ಬರೆದು ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಹಾಗೂ ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು  ಭಾರತ ವಿದ್ಯಾರ್ಥಿ ಫೆಡರೇಶನ್ ಜಿಲ್ಲಾಧಿಕಾರಿ ಮತ್ತು ಮಂಗಳೂರು ನಗರ ಪೋಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿ ಒತ್ತಾಯಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯು ಒಂದು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಇಲ್ಲಿಗೆ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದಲೂ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ  ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ಇಲ್ಲಿನ ಬಹುತೇಕ ಖಾಸಗೀ ಶಿಕ್ಷಣ ಸಂಸ್ಥೆಗಳು ಸರಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ದುಬಾರಿ ಶುಲ್ಕವನ್ನು ವಸೂಲಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಸುಲಿಗೆ ನಡೆಸುತ್ತಿವೆ. ಈ ರೀತಿ ಶುಲ್ಕದ ಹೆಸರಿನಲ್ಲಿ ಸುಲಿಗೆ, ಸರಿಯಾದ ಸಂಖ್ಯೆಯ ಶಿಕ್ಷಕರನ್ನು ನೇಮಿಸದೆ  ಇರುವ ಶಿಕ್ಷಕರಿಗೆ ತಿಂಗಳ ವೇತನವನ್ನೂ ನೀಡದೆ ಸತಾಯಿಸುವುದು, ಕೊಠಡಿಗಳ ಕೊರತೆ ಹೀಗೆ ಮೊದಲಾದ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳ ಫಲಿತಾಂಶ ಮತ್ತು ಅವರ ಭವಿಷ್ಯಕ್ಕೆ ತೊಡಕಾಗುತ್ತಿದ್ದು ಇಂತಹ ಗಂಭೀರ ಸಮಸ್ಯೆಗಳು ಅವರ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವುದರಿಂದ ಕೆಲವೊಂದು ವಿದ್ಯಾರ್ಥಿಗಳು ಖಿನ್ನತೆಗೊಳಗಾಗಿ ಆತ್ಮಹತ್ಯೆಯಂತಹ ಕೆಲಸಗಳಿಗೆ ಪ್ರೇರೇಪಿಸುತ್ತಿದ್ದೆ.  ಈಗಾಗಲೇ ಮಂಗಳೂರಿನ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಲು ಸಾಲು ಶೈಕ್ಷಣಿಕ ಹತ್ಯೆಗಳು ನಡೆದಿದ್ದು ಈ ಕುರಿತು ಜಿಲ್ಲಾಡಳಿತವಾಗಲಿ, ಶಿಕ್ಷಣ ಇಲಾಖೆಯಾಗಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಜಾಣ ಮೌನ ವಹಿಸುವ ಮೂಲಕ ಖಾಸಗೀ ಶಿಕ್ಷಣ ಸಂಸ್ಥೆಗಳ ಒಡೆಯರ ಹಿತವನ್ನು ರಕ್ಷಿಸುತ್ತಿದೆ. 

ಈ ಎಲ್ಲ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಂಗಳೂರಿನ ಖಾಸಗೀ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಶೈಕ್ಷಣಿಕ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಈವರೆಗು ಶಿಕ್ಷಣ ಸಂಸ್ಥೆಗಳಲ್ಲಿ ನಡೆದಿರುವ ಎಲ್ಲ ಆತ್ಮಹತ್ಯೆ ಪ್ರಕರಣಗಳನ್ನು ತನಿಖೆಗೆ  ಒಳಪಡಿಸಬೇಕು. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪ್ರಚೋದಿಸುವ ಹಿಂದಿರುವ ನೈಜ ಕಾರಣಗಳನ್ನು ಪತ್ತೆಹಚ್ಚಬೇಕು ಮತ್ತು ಅವರ ಸಾವಿಗೆ ಕಾರಣರಾದ ಕಾಲೇಜು ಆಡಳಿತ ಮಂಡಳಿಯ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ಎಫ್ಐ ದ.ಕ ಜಿಲ್ಲಾ ಸಮಿತಿ ಒತ್ತಾಯಿಸುತ್ತದೆ ಎಂದು ಜಿಲ್ಲಾ ಸಂಚಾಲಕ ವಿನಿತ್ ದೇವಾಡಿಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು