6:28 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಣೆ! ಭಾರಿಯಿಂದ ಅತೀ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

24/07/2023, 19:21

ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜೆಲ್ಲೆಗಳಾದ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ ಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಇಂದು ಭಾರಿಯಿಂದ ಅತೀ ಭಾರೀ 204.4 ಎಂಎಂ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ, ಫಲ್ಗುಣಿ ಸೇರಿದಂತೆ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಿದೆ.
ಘಟ್ಟ ಪ್ರದೇಶ ಹಾಗೂ ಕರಾವಳಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಪಯಸ್ವಿಣಿ, ಫಲ್ಗುಣಿ, ನಂದಿನಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದೆ. ನೇತ್ರಾವತಿ, ಕುಮಾರಧಾರಾ ಮತ್ತು ಫಲ್ಗುಣಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಮಂಗಳೂರು ನಗರದಲ್ಲೂ ಗಾಳಿ ಮಳೆಗೆ ಕಳೆದ ಎರಡು ದಿನಗಳಿಂದ ಹಲವು ಮರಗಳು ಧರಾಶಾಹಿಯಾಗಿವೆ. ಲಾಲ್ ಬಾಗ್ ಬಳಿ ಫ್ಲೆಕ್ಸ್ ಮುರಿದು ಬಿದ್ದಿದೆ.
ಬಜಾಲ್ ಸಮೀಪ ಗಾಳಿ ಮಳೆಗೆ ಹೋಟೆಲ್ ಮೇಲೆ ಸೋಮವಾರ ಬೆಳಗ್ಗೆ ಮರ ಬಿದ್ದು ವಿದ್ಯುತ್ ಕಂಬಗಳ ತಂತಿಗೆ ಹಾನಿಯಾಗಿದ್ದು, ಸುತ್ತ ಮುತ್ತ ವಿದ್ಯುತ್ ಸಂಪರ್ಕ ಬೆಳಗಿನಿಂದ ಕಡಿತಗೊಂಡಿದೆ. ಮಳೆಯನ್ನು ಲೆಕ್ಕಿಸದೆ ಲೈನ್ ಮ್ಯಾನ್ ಕಂಬ ಹತ್ತಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು