8:28 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕರಾವಳಿ, ಮಲೆನಾಡಿನಲ್ಲಿ ಬಿಜೆಪಿ ಓಟಕ್ಕೆ ಬ್ರೇಕ್ ಹಾಕುವ ತಂತ್ರ: ಮಂಗಳೂರಿನಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಸಭೆ

25/01/2023, 16:46

ಮಂಗಳೂರು(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಯ ಗೆಲುವು ಸಾಧಿಸುವ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಸೇರಿದಂತೆ 6 ಜಿಲ್ಲೆಗಳ ಆಕಾಂಕ್ಷಿ ಅಭ್ಯರ್ಥಿಗಳ ಮತ್ತು ನಾಯಕರ ಸಭೆ ನಗರದ ಮಲ್ಲಿಕಟ್ಟೆಯಲ್ಲಿ ಬುಧವಾರ ನಡೆಯಿತು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ‌ ಮತ್ತು ಬಿ.ಕೆ. ಹರಿಪ್ರಸಾದ್ ಉಸ್ತುವಾರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಯಿತು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಮೇಲೆ ಈ ಬಾರಿ ಹಿಡಿತ ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, 2019ರ ಲೋಕಸಭೆ ಚುನಾವಣೆ ಅಭ್ಯರ್ಥಿಗಳು, 2013 ಮತ್ತು 2018ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳು, ಹೊಸ ಆಕಾಂಕ್ಷಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು. ಚುನಾವಣೆ ತಯಾರಿ, ಪ್ರಚಾರ ಕಾರ್ಯ, ಪ್ರಣಾಳಿಕೆ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು. 8 ವರ್ಷಗಳ ಬಿಜೆಪಿ ಆಡಳಿತದ ವೈಫಲ್ಯಗಳು, ಭ್ರಷ್ಟಾಚಾರದ ಬಗ್ಗೆ ಜನರಿಗೆ ಮನವರಿಕೆ ಮಾಡುವುದು, ಕಾಂಗ್ರೆಸ್ ಅವಧಿ ಸಾಧನೆಗಳ ಬಗ್ಗೆ ಜನರಿಗೆ ಮತ್ತೆ
ತಿಳಿಸುವ ಕಾರ್ಯಕ್ರಮ ಏರ್ಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿಧಾನಸಭೆ ಮಟ್ಟದಲ್ಲಿಯೂ ಸಭೆ ನಡೆಸುವ ಬಗ್ಗೆಯೂ ಚಿಂತನೆ ಕೂಡ ನಡೆಸಲಾಯಿತು.


ಕರಾವಳಿ ಜಿಲ್ಲೆಗಳ ಜತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಮೇಲೆ ಕೂಡ ಈ ಬಾರಿ ಹಿಡಿತ ಸಾಧಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕರಾವಳಿಗೆ ಸೀಮಿತವಾಗಿ ಒಟ್ಟು 10 ಅಂಶಗಳ ವಿಶೇಷ ಯೋಜನೆಗಳ ದಾಳವನ್ನು ಉರುಳಿಸುವ ಮೂಲಕ ಕಾಂಗ್ರೆಸ್ ಕರಾವಳಿ ಮತ ಬುಟ್ಟಿಗೆ ಕೈ ಹಾಕಿದೆ. ವಿಧಾನ ಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಬಿಜೆಪಿ ಓಟಕ್ಕೆ ಬ್ರೇಕ್ ಹಾಕುವ ಸಲುವಾಗಿ ಸುರ್ಜೇವಾಲಾ, ಹರಿಪ್ರಸಾದ್ ಅವರ ನೇತೃತ್ವದಲ್ಲಿ ಸಭೆ ನಡೆಸಿದೆ. ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್,
ಕಡೂರು ಮಾಜಿ ಶಾಸಕ ವೈ.ಎಸ್. ದತ್ತಾ, ಮಾಜಿ ಶಾಸಕರುಗಳಾದ ಜೆ.ಆರ್. ಲೋಬೊ, ಮೊಯ್ದೀನ್ ಬಾವಾ, ವಸಂತ ಬಂಗೇರ, ಮಿಥುನ್ ರೈ‌ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು