5:27 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕರಾವಳಿ ಪ್ರಜಾಧ್ವನಿ ಯಶಸ್ವಿಗೆ ಸಂಯೋಜಕರ ನೇಮಕ: ಶಾಸಕ ಡಾ. ಮಂಜುನಾಥ ಭಂಡಾರಿ

05/02/2023, 12:45

ಮಂಗಳೂರು(reporterkarnataka.com): ಪ್ರಜಾಧ್ವನಿಯ ಯಶಸ್ವಿಯ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಇಂದಿನಿಂದ (ಜ.5) ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಯಾತ್ರೆಯ ಸಂಘಟನೆಗೆ ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರನ್ನು ಜಿಲ್ಲಾ ಸಂಯೋಜಕರಾಗಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಅವರನ್ನು ಸಹ ಸಂಯೋಜಕಿಯಾಗಿ ನೇಮಕ ಮಾಡಲಾಗಿದೆ.

ವಿಧಾನ ಪರಿಷತ್‌ ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಶಿಫಾರಸ್ಸು ಹಾಗೂ ಕರಾವಳಿ ಕರ್ನಾಟಕದ ಸಂಯೋಜಕರಾದ ಬಿ.ಕೆ. ಹರಿಪ್ರಸಾದ್ ಅವರ ಅನುಮತಿ ಮೇರೆಗೆ ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಉಸ್ತುವಾರಿ ನೇಮಕ ಮಾಡಲಾಗಿದೆ. ಸುಳ್ಯ ಕ್ಷೇತ್ರಕ್ಕೆ ಶಕುಂತಳಾ ಶೆಟ್ಟಿ, ಪುತ್ತೂರಿಗೆ ಜೆ.ಆರ್. ಲೋಬೊ, ಬೆಳ್ತಂಗಡಿಗೆ ಶಶಿಧರ್ ಹೆಗ್ಡೆ, ಬಂಟ್ವಾಳಕ್ಕೆ ಬಿ. ಇಬ್ರಾಹಿಂ, ಮೂಡುಬಿದಿರೆಗೆ ಮಹಾಬಲ ಮಾರ್ಲ, ಮಂಗಳೂರು ಕ್ಷೇತ್ರಕ್ಕೆ ಕವಿತಾ ಸನಿಲ್, ಮಂಗಳೂರು ದಕ್ಷಿಣಕ್ಕೆ ಮೊಯಿದ್ದೀನ್ ಬಾವಾ ಹಾಗೂ ಮಂಗಳೂರು ಉತ್ತರಕ್ಕೆ ಐವನ್ ಡಿಸೋಜ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು