2:35 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು