2:40 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು