11:27 AM Monday2 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು