1:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಕರಾವಳಿ ಸಂಗೀತ ಕಲಾವಿದರ ಒಕ್ಕೂಟ: ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ

19/09/2024, 10:54

ಮಂಗಳೂರು(reporterkarnataka.com):ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ವತಿಯಿಂದ ಸ್ವರ ಕುಡ್ಲ ಸೀಸನ್- 6 ಸಂಗೀತ ಸ್ಪರ್ಧೆ ಉದ್ಘಾಟನೆ ನಡೆಯಿತು.


ಸ್ಪರ್ಧೆಯನ್ನು ಉದ್ಘಾಟಿಸಿದ ಜ್ಯೋತಿಷಿ ಹಾಗೂ ಗಾಯಕ ಉದಯ ಕುಮಾರ್ ಅವರು ಮಾತನಾಡಿ, ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಅಭಿಪ್ರಾಯಪಟ್ಟರು.
ಒಕ್ಕೂಟದ ಅಧ್ಯಕ್ಷ ದೀಪಕ್ ರಾಜ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದುಕ, ರತ್ನಾಸ್ ವೈನ್ ಗೇಟ್ ಮಾಲಕ ಡಿ.ರಮೇಶ್ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಕೋರಿದರು. ಒಕ್ಕೂಟದ ಸ್ಥಾಪಕ ಅಧ್ಯಕ್ಷ ಸದಾಶಿವ ದಾಸ್ ಪಾಂಡೇಶ್ವರ, ಉಪಾಧ್ಯಕ್ಷ ರಾಧಾಕೃಷ್ಣ ಭಟ್ ಉಡುಪಿ , ಪ್ರಧಾನ ಕಾರ್ಯದರ್ಶಿ ಕೇಶವ ಕನಿಲ, ಖಜಾಂಚಿ ಸತೀಶ್ ಅತಿಥಿಗಳನ್ನು ಗೌರವಿಸಿದರು. ಒಕ್ಕೂಟದ ಗೌರವ ಸಲಹೆಗಾರ ತೋನ್ಸೆ ಪುಷ್ಕಳ ಕುಮಾರ ಸ್ವಾಗತಿಸಿದರು. ಮಾಜಿ ಅಧ್ಯಕ್ಷರುಗಳಾದ ಜಗದೀಶ್ ಶೆಟ್ಟಿ, ಮಹಮದ್ ಇಕ್ಬಾಲ್, ನವಗಿರಿ ಗಣೇಶ್, ರಮೇಶ್ ಸಾಲ್ಯಾನ್, ಮಲ್ಲಿಕಾ ಶೆಟ್ಟಿ, ಹಾಗೂ ಸುಭಾಷಿತ್ ಕುಮಾರ್, ಮುಕ್ತ ಶ್ರೀನಿವಾಸ್ ಉಡುಪಿ , ಹುಸೇನ್ ಕಾಟಿಪಳ್ಳ, ದಿನಕರ ಪಾಂಡೇಶ್ವರ್, ಧನುರಾಜ್, ಕೆ.ಆರ್. ಕಾರಂತ್, ಚೈತ್ರಾ ಸುವರ್ಣ ಧನ್ಯಶ್ರೀ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಆಡಿಷನ್ ಮತ್ತು ಸೆಮಿ ಫೈನಲ್ ಸ್ಪರ್ಧೆಯ ತೀರ್ಪುಗಾರರಾಗಿ ಮುರಳಿಧರ್ ಕಾಮತ್, ಶಿನಾಯ್, ಪಲ್ಲವಿ ಪ್ರಭು, ಕಿರಣ್ ಕುಮಾರ್, ಯಶವಂತ್ ಜಿ., ಸೌಮ್ಯ ಭಟ್ ಸಹಕರಿಸಿದರು. ವಿ ಜೆ ಶೀಶಾನ್ ಕೌಡೂರು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು